ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ ಹಾಗೂ ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು ಹೊಸ ಅರ್ಜಿ ಪ್ರಕ್ರಿಯೆ ಜಾರಿಗೆ ಬರುವ ಸಾಧ್ಯತೆ ಇದೆ. ಇತ್ತೀಚಿನ ವರದಿಗಳ ಪ್ರಕಾರ, ಈಗಾಗಲೇ ಯೋಜನೆಗಳ ಲಾಭ ಪಡೆಯುತ್ತಿರುವವರು ಕೂಡ ಮರು ಅರ್ಜಿ ಸಲ್ಲಿಸಬೇಕಾಗಬಹುದು. ಆದರೆ ಈ ಬಗ್ಗೆ ರಾಜ್ಯ ಸರ್ಕಾರದಿಂದ ಇನ್ನೂ ಅಧಿಕೃತ ಆದೇಶ ಪ್ರಕಟವಾಗಿಲ್ಲ. ಹೊಸ ಅರ್ಜಿ ಸಲ್ಲಿಕೆ […]

